ರಿಪೋರ್ಟರ್: ಎಂ.ಎನ್. ಚಂದ್ರೇಗೌಡ ಸ್ಲಗ್: ಬಿಜೆಪಿ- ಸುಷ್ಮಾ ಡೇಟ್; ಬೆಂಗಳೂರು ಆಂಕರ್: ಬಳ್ಳಾರಿಯ ರೆಡ್ಡಿ ಸಹೋದರರನ್ನು ಸಚಿವ ಸಂಪುಟದಿಂದ ಕೈಬಿಡಲು ತುದಿಗಾಲ ಮೇಲೆ ನಿಂತಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಲೋಕಸಭೆ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್ ತಡೆಹಾಕಿದ್ದಾರೆಂದು ಬಿಜೆಪಿಯ ಉನ್ನತ ಮೂಲಗಳು ತಿಳಿಸಿವೆ. ಗಣಿಧಣಿಗಳನ್ನು ಹದ್ದುಬಸ್ತಿನಲ್ಲಿಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ, ಹಿರಿಯ ನಾಯಕ ಅಡ್ವಾಣಿಯವರ ಅನುಮತಿ ಪಡೆದಿರುವ ಯಡಿಯೂಪ್ಪನವರಿಗೆ ಈಗ ತಡೆಗೋಡೆಯಾಗಿರುವುದು ಸುಷ್ಮಾ ಸ್ವರಾಜ್. ಅವರ ಆಶೀವರ್ಾದದಿಂದಲೇ ರೆಡ್ಡಿ ಬ್ರದರ್ಸ ಈಗ ಬಳ್ಳಾರಿಯಲ್ಲಿ ಪಕ್ಷದ ಅನುಮತಿ ಪಡೆಯದೆ ಸ್ವಾಭಿಮಾನಿ ಯಾತ್ರೆ ಕೈಗೊಂಡಿದ್ದಾರೆ. ಇದಕ್ಕೆ ಮುಖ್ಯಮಂತ್ರಿಗಳು ತೀವ್ರ ಅಸಮಧಾನಗೊಂಡಿದ್ದಾರೆಂದು ಹೇಳಲಾಗಿದೆ. ಫ್ಯಾಕೇಜ್ ಫಾಲೋಸ್…. ವಾಯ್ಸ್ ಓವರ್: ಶತಾಯಗತಾಯ ಬಳ್ಳಾರಿ ಗಣಿಧಣಿಗಳನ್ನು ಹತ್ತಿಕ್ಕಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗ ಮನಸ್ಸು ಮಾಡಿದ್ದಾರೆ. ಇದಕ್ಕೆ ರಾಜ್ಯ ಬಿಜೆಪಿ ಘಟಕದ ಬೆಂಬಲದ ಜತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ, ಬಿಜೆಪಿ ಅತ್ಯಂತ ಹಿರಿಯ ನಾಯಕ ಎಲ್,ಕೆ. ಆಡ್ವಾಣಿ ಅವರಿಂದಲೂ ಯಡಿಯೂರಪ್ಪ ಗ್ರೀನ್ ಸಿಗ್ನಲ್ ಪಡೆದಿದ್ದಾರೆಂದು ಉನ್ನತ ಮೂಲಗಳು ತಿಳಿಸಿವೆ. ಆದರೆ ಯಡಿಯೂರಪ್ಪನವರಿಗೆ ಅಡ್ಡಿಯಾಗಿರುವುದು ಮಾತ್ರ ಈಗ ಲೋಕಸಭೆಯ ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್. ರೆಡ್ಡಿ ಬ್ರದರ್ಸಗಳನ್ನು ಬೆಂಬಲಿಸಬೇಕೆ ಹೊರತು ಅವರನ್ನು ಸಂಪುಟದಿಂದ ಕೈಬಿಡುವ ಪ್ರಶ್ನೆಯೇ ಇಲ್ಲವೆಂದು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸುಷ್ಮಾ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ. ಸುಷ್ಮಾ ಅವರ ನೋ ಎನ್ನುವ ಮಾತುಗಳು ಮುಖ್ಯಮಂತ್ರಿಗಳ ಕೈಕಟ್ಟಿಹಾಕಿದೆ ಎಂದು ಹೇಳಲಾಗುತ್ತಿದೆ. ಒಂದು ವೇಳೆ ರೆಡ್ಡಿ ಬ್ರದರ್ಸರನ್ನು ಸಂಪುಟದಿಂದ ಕೈಬಿಟ್ಟು ಸಕರ್ಾರಕ್ಕೇನಾದರೂ ಆಪತ್ತು ಎದುರಾದರೆ ಎಂಬ ಪ್ರಶ್ನೆ ಉದ್ಭವವಾಗಿರುವುದರಿಂದಲೇ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್. ಈಶ್ವರಪ್ಪ, ಜೆಡಿಎಸ್ ನಾಯಕರ ಜತೆ ಮಾತುಕತೆ ನಡೆಸಲು ಮುಖ್ಯಮಂತ್ರಿಗಳು ಗ್ರೀನ್ ಸಿಗ್ನಲ್ ನೀಡಿದ್ದಾರೆಂದು ಮೂಲಗಳು ತಿಳಿಸಿವೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾತ್ರ, ಪ್ರತಿ ಸಾರಿ ಹೀಗೆ ಸುದ್ದಿ ಎಬ್ಬಿಸಿ ಸುಮ್ಮನಾಗುವುದು ಬೇಡ. ಏನಾದರೂ ನಿದರ್ಿಷ್ಟ. ಗಟ್ಟಿ ನಿಧರ್ಾರ ತೆಗೆದುಕೊಳ್ಳುವುದಾದರೆ ಬನ್ನಿ ಎಂದು ತಮ್ಮ ಜತೆ ಆಪ್ತರಾಗಿರುವ ಬಿಜೆಪಿ ಶಾಸಕರ ಮೂಲಕ ಯಡಿಯೂರಪ್ಪನವರಿಗೆ ಸುದ್ದಿ ಮುಟ್ಟಿಸಿದ್ದಾರೆಂದು ಮೂಲಗಳು ತಿಳಿಸಿವೆ. ಈ ಹಿನ್ನಲೆಯಲ್ಲಿಯೇ ಜೆಡಿಎಸ್ನ ನಾಯಕ ಹೆಚ್.ಡಿ. ರೇವಣ್ಣ, ಬಿಜೆಪಿ- ಜೆಡಿಎಸ್ ಮೈತ್ರಿ ಬಗ್ಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಜತೆಗೆ ಮುಖ್ಯಮಂತ್ರಿಗಳು ಬಿಜೆಪಿ ವರಿಷ್ಠರ ಜತೆ ಚಚರ್ಿಸಿ ಈ ಬಗ್ಗೆ ತೀಮರ್ಾನ ತೆಗೆದುಕೊಳ್ಳುವುದಾಗಿ ತುಮಕೂರಿನಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಸಚಿವ ರೇಣುಕಾಚಾರ್ಯ ನೇತೃತ್ವದ ಶಾಸಕರ ತಂಡ ನಿನ್ನೆ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಮುಖ್ಯಮಂತ್ರಿಗಳಿಗೆ ಅವರುಗಳ ಮೇಲಿದ್ದ ಗೊಂದಲವನ್ನು ಬಗೆಹರಿಸಿದೆ ಎಂದು ಹೇಳಲಾಗಿದೆ. ಆದ್ದರಿಂದಲೇ ಮುಖ್ಯಮಂತ್ರಿಗಳು ನಿನ್ನೆ ಜನಾರ್ದನ ರೆಡ್ಡಿ ಅವರನ್ನು ಬೆಂಗಳೂರಿಗೆ ಕರೆಸಿ, ಸ್ವಾಭಿಮಾನಿ ಯಾತ್ರೆ ನಿಲ್ಲಿಸುವಂತೆ ತಾಕೀತು ಮಾಡಿದ್ದಾರೆಂದು ಹೇಳಲಾಗಿದೆ. ಇಲ್ಲವಾದರೆ ಮುಂದಿನ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆಂದು ಮೂಲಗಳು ತಿಳಿಸಿವೆ. —ಎಂ.ಎನ್. ಚಂದ್ರೇಗೌಡ ಸಮಯ ನ್ಯೂಸ್ ಬೆಂಗಳೂರು